‘ಅನ್ಯಾಯ ನಿಲ್ಲದಿದ್ದರೆ ಪ್ರತ್ಯೇಕ ರಾಜ್ಯ ಚಳವಳಿ’
ಬೆಂಗಳೂರು, ಡಿ. 21– ಹೈದರಾಬಾದ್–ಕರ್ನಾಟಕ ಪ್ರದೇಶಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ‘ಪ್ರತ್ಯೇಕ ರಾಜ್ಯ ಬೇಡಿಕೆ’ ಚಳವಳಿಯನ್ನು ಹಮ್ಮಿಕೊಳ್ಳಬೇಕಾದೀತು ಎಂದು ಹೈದರಾಬಾದ್–ಕರ್ನಾಟಕ ಯುವ ಸಂಘರ್ಷ ಸಮಿತಿ ಮತ್ತು ವಿಜಾಪುರ ಜಿಲ್ಲಾ ಸಂಘರ್ಷ ಸಮಿತಿಗಳ ಸಮನ್ವಯ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದೆ. ಕಳೆದ ಏಳೆಂಟು ವರ್ಷಗಳಿಂದ ಈ ಭಾಗದ ಐದು ಜಿಲ್ಲೆಗಳನ್ನು ಕಡೆಗಣಿಸಿ ಮಲತಾಯಿ ಧೋರಣೆ ಅನುಸರಿಸಿಕೊಂಡು ಬರಲಾಗುತ್ತಿದೆ ಎಂದು ಒಕ್ಕೂಟದ ಪ್ರಧಾನ ಸಂಚಾಲಕ ಲಕ್ಷ್ಮಣ ದಸ್ತಿ, ವಕ್ತಾರ ಡಿ.ವಿ. ಪಾಟೀಲ ತಿಳಿಸಿದರು.