‘ವೃಥಾ ಖರ್ಚು ಉಳಿಸಲು’ ಸಂಪುಟ ತೀರ್ಮಾನ: ಮಾರ್ಚ್ ಅಂತ್ಯದೊಳಗೆ ಪಂಚಾಯಿತಿ ಚುನಾವಣೆ
ಬೆಂಗಳೂರು, ಜ. 3– ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಮಾರ್ಚ್ ಅಂತ್ಯದೊಳಗೆ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಜನಪ್ರತಿನಿಧಿಗಳಿಗೆ ಹೆಚ್ಚಿನ ಅಧಿಕಾರ ನೀಡಲು ಪಂಚಾಯತ್ ರಾಜ್ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ಅಗತ್ಯ ತಿದ್ದುಪಡಿ ತರಲೂ ಅದು ತೀರ್ಮಾನಿಸಿದೆ.