ನವದೆಹಲಿ, ಜುಲೈ 14 (ಯುಎನ್ಐ)– ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ಕಟ್ಟಲು ನಿಷೇಧಿತ ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ನಿಯಂತ್ರಣದಲ್ಲಿರುವ ಟ್ರಸ್ಟ್ಗೆ ತಾವು ಎಂದೆಂದಿಗೂ ಅವಕಾಶ ನೀಡುವುದಿಲ್ಲವೆಂದು ಪ್ರಧಾನಿ ಪಿ.ವಿ. ನರಸಿಂಹರಾವ್ ಇಂದು ಇಲ್ಲಿ ಸ್ಪಷ್ಟವಾಗಿ ತಿಳಿಸಿದರು. ಆದರೆ ಅಲ್ಲಿ ದೇವಾಲಯ ನಿರ್ಮಾಣ ಖಂಡಿತವಾಗಿ ಆಗಬೇಕು, ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕವಿಲ್ಲದ ಧಾರ್ಮಿಕ ನಾಯಕರು ಇದನ್ನು ಮಾಡಬೇಕು ಎಂದು ಸೂಚಿಸಿದರು.