ರಾಷ್ಟ್ರದ ಜನತೆ, ಸಂಘ–ಸಂಸ್ಥೆಗಳು ಆಗಸ್ಟ್ 15 ಮತ್ತು ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಸಿದರೆ, ಬಿಜೆಪಿಯ ಮಾತೃ ಸಂಘಟನೆ ಆರ್ಎಸ್ಎಸ್ ಮಾತ್ರ ತನ್ನ ಕಚೇರಿ–ಶಾಖೆಗಳಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿಲ್ಲ. ಆದ್ದರಿಂದ ಈ ಬಾರಿ ರಾಷ್ಟ್ರಧ್ವಜ ಹಾರಿಸಲು ಜನತಾ ಪಕ್ಷ ನಿರ್ಧರಿಸಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ. ಸುಬ್ಬಯ್ಯಶೆಟ್ಟಿ ತಿಳಿಸಿದ್ದಾರೆ.