‘ಯಾವ ಕಾರಣಕ್ಕೂ ಯಾವುದೇ ಕಾಲದಲ್ಲೂ ಉರ್ದು ವಾರ್ತೆಗಳನ್ನು ಬೆಂಗಳೂರು ದೂರದರ್ಶನ ಕೇಂದ್ರದಿಂದ ಬಿತ್ತರಿಸಲಾಗದು. ಈ ಕೇಂದ್ರ ಕನ್ನಡ ಭಾಷೆಗಾಗಿಯೇ ಮೀಸಲಾಗಿರಬೇಕು’ ಎಂದು ಕನ್ನಡ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಡಾ. ರಾಜ್ಕುಮಾರ್, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಲಿ ಅಧ್ಯಕ್ಷ ಕೆ.ಸಿ.ಎನ್. ಚಂದ್ರು, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷ ಸಿ.ವಿ.ಎಲ್. ಶಾಸ್ತ್ರಿ, ನಿರ್ದೇಶಕರ ಸಂಘದ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ (ಬಾಬು) ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.