ಕುವೆಂಪು ನಿಧನಕ್ಕೆ ವ್ಯಾಪಕ ಶೋಕ: ಇಂದು ಅಂತ್ಯಕ್ರಿಯೆ
ಮೈಸೂರು, ನ. 10– ಗುರುವಾರ ಬೆಳಗಿನ ಜಾವ ಒಂದು ಗಂಟೆಗೆ ‘ಉದಯ ರವಿ’ ಯಲ್ಲಿ ಅಸ್ತಂಗತರಾದ ಕನ್ನಡ ನಾಡಿನ ಅದ್ಭುತ ಚೇತನ, ಸಾರಸ್ವತ ಲೋಕದ ಮೇರು ಪ್ರತಿಭೆ, ರಾಷ್ಟ್ರಕವಿ ಡಾ. ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಕುಪ್ಪಳಿಯ ಕವಿಶೈಲದಲ್ಲಿ ಬೆಳಿಗ್ಗೆ 11 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.