ಬೆಳಗಾವಿ, ನ. 17– ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಕ್ಕರೆ ಕಾರ್ಖಾನೆಗಳನ್ನು ಪರವಾನಗಿ (ಲೈಸನ್ಸ್) ವ್ಯಾಪ್ತಿಯಿಂದ ಹೊರಗಿಡುವ ಅಥವಾ ಸರಳಗೊಳಿಸುವ ಬಗೆಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ಇಂದು ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕಟಿಸಿದರು.