ಮದ್ರಾಸ್, ಜ. 12 (ಯುಎನ್ಐ, ಪಿಟಿಐ)– ಚುನಾವಣೆಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಹೊಣೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಬಜೆಟ್ ಮಂಡನೆಯಿಂದ ಚುನಾವಣೆಯ ಪಾವಿತ್ರ್ಯಕ್ಕೆ ಧಕ್ಕೆ ಬಂದರೆ ತಾವು ಸಂವಿಧಾನದ 324ನೇ ಕಲಂನನ್ವಯ ತಮ್ಮ ಅಧಿಕಾರ ಚಲಾಯಿಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರು ಇಂದು ಇಲ್ಲಿ ಎಚ್ಚರಿಕೆ ನೀಡಿದರು.