ಏಕಕಾಲದಲ್ಲಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಳಿಕ ರಾಜ್ಯದ 19 ಜಿಲ್ಲಾ ಕೇಂದ್ರಗಳಲ್ಲಿ ‘ಆಲಿಸುತ್ತಿದ್ದ’ ಪಂಚಾಯಿತಿಯ ಚುನಾಯಿತ ಮಹಿಳಾ ಪ್ರತಿನಿಧಿಗಳು, ನೀರಾವರಿ ನಿರ್ವಹಣಾ ಕಾರ್ಯಕರ್ತರು, ಪ್ರಗತಿಪರ ರೈತರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಮಾತನಾಡಿದರು.