ಠಾಕ್ರೆ ಹೇಳಿಕೆಗೆ ಉಗ್ರ ಪ್ರತಿಭಟನೆ; ವಿವಾದ ಕೇಂದ್ರದ ಪರಿಶೀಲನೆಯಲ್ಲಿ
ನವದೆಹಲಿ, ಮಾರ್ಚಿ 29 (ಪಿಟಿಐ, ಯುಎನ್ಐ)– ತಮಗೆ ಜೀವ ಬೆದರಿಕೆ ಹಾಕಿರುವ ವ್ಯಕ್ತಿಗಳ ನಿರ್ದಿಷ್ಟ ಸಮುದಾಯವನ್ನು ನಿರ್ನಾಮ ಮಾಡುವುದಾಗಿ ಶಿವಸೇನಾ ನಾಯಕ ಬಾಳಾ ಠಾಕ್ರೆ ಅವರು ಬೆದರಿಕೆ ಹಾಕಿದ್ದಾರೆ ಎಂಬ ವರದಿಯ ಬಗ್ಗೆ ಕೇಂದ್ರ ಗೃಹ ಖಾತೆ ಪರಿಶೀಲಿಸುತ್ತಿದೆ. ಈ ಮಧ್ಯೆ ಠಾಕ್ರೆ ಹೇಳಿಕೆಗೆ ಎಲ್ಲೆಡೆಯಿಂದ ಉಗ್ರ ಪ್ರತಿಭಟನೆ ವ್ಯಕ್ತವಾಗಿದೆ.