<p><strong>ಕನ್ನಡಿಗರಿಗೆ ಮಾತ್ರ ಸಿಇಟಿ</strong><br /><strong>ಬೆಂಗಳೂರು, ಏ. 28–</strong> ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ನೀಡಲು ಕರ್ನಾಟಕ, ಗಡಿನಾಡು ಹಾಗೂ ಹೊರನಾಡ ಕನ್ನಡಿಗ ವಿದ್ಯಾರ್ಥಿ<br />ಗಳಿಗೆ ಮಾತ್ರ ಅನ್ವಯಿಸುವಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಇಂದು ನಿರ್ಧರಿಸಿತು.</p>.<p>ಹೊರರಾಜ್ಯದ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಲಿಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಕೋಟಾದಲ್ಲಿ ಪ್ರವೇಶ ಪಡೆಯಬೇಕಾಗಿದೆ. ವೈದ್ಯಕೀಯ ಶಿಕ್ಷಣದಲ್ಲಿ ಶೇಕಡ 10 ಹಾಗೂ ಎಂಜಿನಿಯರಿಂಗ್ ಶಿಕ್ಷಣ ಪ್ರವೇಶದಲ್ಲಿ ಶೇಕಡ 5ರಷ್ಟು ಸೀಟುಗಳನ್ನು ಬಿಟ್ಟುಕೊಡಲಾಗಿತ್ತು. ಈ ಸೀಟುಗಳನ್ನೂ ಅರ್ಹತೆಯ ಆಧಾರದ ಮೇಲೆಯೇ ತುಂಬಬೇಕಾಗಿದೆ.</p>.<p><strong>ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ</strong><br /><strong>ಬೆಂಗಳೂರು, ಏ. 28–</strong> ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳ ಒಂದರಿಂದ ನಾಲ್ಕನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಹಾಗೂ ಪರಿಶಿಷ್ಟ ಜಾತಿ– ಬುಡಕಟ್ಟಿನ ಒಂದರಿಂದ ಏಳನೇ ತರಗತಿಯ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಯೋಜನೆ ಜಾರಿಗೆ ತರಲು ಸರ್ಕಾರ ಇಂದು ನಿರ್ಧರಿಸಿತು.</p>.<p>ಸರ್ಕಾರದ ‘ಸಿ’ ಮತ್ತು ‘ಡಿ’ ಗುಂಪಿನ ಹುದ್ದೆಗಳಿಗೆ ನೇಮಕ ಮಾಡುವಾಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲೂ ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಅಭ್ಯರ್ಥಿಗಳು ಶೈಕ್ಷಣಿಕ ಕೋರ್ಸ್ಗಳಲ್ಲಿ ಪಡೆದ ಅಂಕಗಳ ಒಟ್ಟು ಮೊತ್ತದಲ್ಲಿ ಶೇಕಡ 5ರಷ್ಟು ಅಥವಾ ಕನಿಷ್ಠ 15 ಹೆಚ್ಚಿನ ಅಂಕಗಳನ್ನು ನೀಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನ್ನಡಿಗರಿಗೆ ಮಾತ್ರ ಸಿಇಟಿ</strong><br /><strong>ಬೆಂಗಳೂರು, ಏ. 28–</strong> ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ನೀಡಲು ಕರ್ನಾಟಕ, ಗಡಿನಾಡು ಹಾಗೂ ಹೊರನಾಡ ಕನ್ನಡಿಗ ವಿದ್ಯಾರ್ಥಿ<br />ಗಳಿಗೆ ಮಾತ್ರ ಅನ್ವಯಿಸುವಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಇಂದು ನಿರ್ಧರಿಸಿತು.</p>.<p>ಹೊರರಾಜ್ಯದ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಲಿಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಕೋಟಾದಲ್ಲಿ ಪ್ರವೇಶ ಪಡೆಯಬೇಕಾಗಿದೆ. ವೈದ್ಯಕೀಯ ಶಿಕ್ಷಣದಲ್ಲಿ ಶೇಕಡ 10 ಹಾಗೂ ಎಂಜಿನಿಯರಿಂಗ್ ಶಿಕ್ಷಣ ಪ್ರವೇಶದಲ್ಲಿ ಶೇಕಡ 5ರಷ್ಟು ಸೀಟುಗಳನ್ನು ಬಿಟ್ಟುಕೊಡಲಾಗಿತ್ತು. ಈ ಸೀಟುಗಳನ್ನೂ ಅರ್ಹತೆಯ ಆಧಾರದ ಮೇಲೆಯೇ ತುಂಬಬೇಕಾಗಿದೆ.</p>.<p><strong>ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ</strong><br /><strong>ಬೆಂಗಳೂರು, ಏ. 28–</strong> ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳ ಒಂದರಿಂದ ನಾಲ್ಕನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಹಾಗೂ ಪರಿಶಿಷ್ಟ ಜಾತಿ– ಬುಡಕಟ್ಟಿನ ಒಂದರಿಂದ ಏಳನೇ ತರಗತಿಯ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಯೋಜನೆ ಜಾರಿಗೆ ತರಲು ಸರ್ಕಾರ ಇಂದು ನಿರ್ಧರಿಸಿತು.</p>.<p>ಸರ್ಕಾರದ ‘ಸಿ’ ಮತ್ತು ‘ಡಿ’ ಗುಂಪಿನ ಹುದ್ದೆಗಳಿಗೆ ನೇಮಕ ಮಾಡುವಾಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲೂ ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಅಭ್ಯರ್ಥಿಗಳು ಶೈಕ್ಷಣಿಕ ಕೋರ್ಸ್ಗಳಲ್ಲಿ ಪಡೆದ ಅಂಕಗಳ ಒಟ್ಟು ಮೊತ್ತದಲ್ಲಿ ಶೇಕಡ 5ರಷ್ಟು ಅಥವಾ ಕನಿಷ್ಠ 15 ಹೆಚ್ಚಿನ ಅಂಕಗಳನ್ನು ನೀಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>