ನವದೆಹಲಿ, ಮೇ 3 (ಪಿಟಿಐ, ಯುಎನ್ಐ)– ಎಂಟನೇ ಸಾರ್ಕ್ ಶೃಂಗಮೇಳ ನಾಳೆ ಮುಕ್ತಾಯಗೊಳ್ಳಲಿದ್ದು,
ಅಂತರರಾಷ್ಟ್ರೀಯ ಒಡಂಬಡಿಕೆಯ ಅಡಿಯಲ್ಲಿ ಸಂಪೂರ್ಣ ನಿಶ್ಶಸ್ತ್ರೀಕರಣ ಏರ್ಪಡಬೇಕು ಎಂಬ ಘೋಷಣೆಯನ್ನು ಅದು ಅಂಗೀಕರಿಸಲಿದೆ. ವಾಣಿಜ್ಯೇತರ ವಿಷಯಗಳಿಗೆ ಸಂಬಂಧಿಸಿ ಹೊಸ ಆರ್ಥಿಕ ಷರತ್ತುಗಳನ್ನು ಹೇರಬಾರದು ಎಂದೂ ಅದು ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಿಗೆ ಕರೆ ನೀಡಲಿದೆ.