ಬೆಂಗಳೂರು, ಮೇ 6– ವರ್ತುಲ ರಸ್ತೆ ನಿರ್ಮಾಣ, ಸಾಮೂಹಿಕ ಕ್ಷಿಪ್ರ ಸಾರಿಗೆ ಯೋಜನೆ ಮತ್ತು ಪ್ರಮುಖ ರಸ್ತೆಗಳ ವಿಸ್ತರಣಾ ಕಾರ್ಯಕ್ಕೆ ಪೂರಕವಾಗಿ ರಕ್ಷಣಾ ಮತ್ತು ರೈಲ್ವೆ ಸಚಿವಾಲಯದ ಜತೆಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಬೆಂಗಳೂರು ನಗರದ ವಾಹನ ಸಂಚಾರ ಸಮಸ್ಯೆಯ ಪರಿಹಾರಕ್ಕೆ ಮೂರು ನಿರ್ದಿಷ್ಟ ಪ್ರಸ್ತಾವಗಳನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ.