ಸಣ್ಣ, ಮಧ್ಯಮ ವರ್ಗದ ರೈತರಿಗೆ ರಸಗೊಬ್ಬರ ಸಬ್ಸಿಡಿ– ಕೇಂದ್ರ ಒಪ್ಪಿಗೆ
ಬೆಂಗಳೂರು, ಜೂನ್ 8– ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಅನುಕೂಲವಾಗುವಂತೆ ರಸಗೊಬ್ಬರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸಹಾಯಧನ ನೀಡಲು ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡರು ಇಂದು ಇಲ್ಲಿ ತಿಳಿಸಿದರು.