ಎಂಜಿನಿಯರುಗಳ ಕಾರ್ಯವೈಖರಿಗೆ ಗೌಡರ ತರಾಟೆ
ಬೆಂಗಳೂರು, ಜೂನ್ 29– ಲೋಕೋಪಯೋಗಿ ಇಲಾಖೆ, ನೀರಾವರಿ ಮತ್ತು ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಳೆದ ಐದು ವರ್ಷಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟ ಹಾಗೂ ಕಾರ್ಯವೈಖರಿಗಳ ಬಗೆಗೆ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಹಿರಿಯ ಎಂಜಿನಿಯರುಗಳನ್ನು ನೇರವಾಗಿ ಟೀಕಿಸಿ ಇಂದು ಇಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.