ಇನ್ನು ಚಿಣ್ಣರಿಗೆ ಕಾಯುವ ಕೆಲಸ ಇಲ್ಲ
ಬೆಂಗಳೂರು, ಜುಲೈ 1– ಬಿಸಿಲು, ಮಳೆ ಲೆಕ್ಕಿಸದೆ ಮಂತ್ರಿ ಮಹೋದಯರು ಹಾಗೂ ಗಣ್ಯ ವ್ಯಕ್ತಿಗಳ ಸ್ವಾಗತಕ್ಕೆ ಶಾಲಾ ಮಕ್ಕಳು ಕಾಯುವ ಅಗತ್ಯವಿಲ್ಲ. ಅಷ್ಟೇ ಅಲ್ಲ ಈ ವ್ಯವಸ್ಥೆ ಯನ್ನು ಮುಂದುವರಿಸಿಕೊಂಡು ಹೋಗುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತಪ್ಪಿದ್ದಲ್ಲ. ಈ ಭರವಸೆಯನ್ನು ಕೊಟ್ಟವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಚ್.ಜಿ.ಗೋವಿಂದೇಗೌಡ.