<p><strong>ಸಮ್ಮಿಶ್ರ ಸರ್ಕಾರ ರಚನೆ: ಹಿಂದೆ ಸರಿದ ಹೆಗಡೆ</strong></p>.<p><strong>ನವದೆಹಲಿ, ಜುಲೈ 8 (ಯುಎನ್ಐ)–</strong> ಕೇಂದ್ರದಲ್ಲಿ ಪಿ.ವಿ.ನರಸಿಂಹರಾವ್ ನೇತೃತ್ವದಲ್ಲಿ ಬಿಜೆಪಿಯೇತರ ಸಮ್ಮಿಶ್ರ ಸರ್ಕಾರ ರಚನೆಗೆ ಬೆಂಬಲ ನೀಡುವ ಕುರಿತ ತಮ್ಮ ಒಂದು ವರ್ಷ ಅವಧಿಯ ಉದ್ದೇಶಿತ ಪ್ರಚಾರವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕೈಬಿಟ್ಟಿದ್ದಾರೆ.</p>.<p>ಹೆಗಡೆ ಅವರ ಜೊತೆ ಇಂದು ಮುಂಜಾನೆ ಒಂದು ಗಂಟೆ ಕಾಲ ಸಭೆ ನಡೆಸಿದ ಜನತಾದಳದ ಹಿರಿಯ ನಾಯಕ ಬಿಜು ಪಟ್ನಾಯಕ್, ಈ ಉದ್ದೇಶವನ್ನು ಒತ್ತಾಯಿಸುವುದು ಅನವಶ್ಯಕ ಎಂಬುದನ್ನು ಹೆಗಡೆ ಅವರು ಮನಗಂಡಿದ್ದಾರೆ ಎಂದರು.</p>.<p><strong>ಗ್ರಾಮೀಣರಿಂದ ಪಶ್ಚಿಮಘಟ್ಟ ಅರಣ್ಯ ಸಂರಕ್ಷಣೆ</strong></p>.<p><strong>ಧಾರವಾಡ, ಜುಲೈ 8– </strong>ಬ್ರಿಟನ್ನಿನ ಸಾಗರೋತ್ತರ ಅಭಿವೃದ್ಧಿ ಸಂಸ್ಥೆಯ ನೆರವಿನಿಂದ ಪಶ್ಚಿಮ ಘಟ್ಟಗಳ ಅರಣ್ಯ ಅಭಿವೃದ್ಧಿ ಮತ್ತು ಸಂರಕ್ಷಣೆಯಲ್ಲಿ ಗ್ರಾಮೀಣ ಜನರನ್ನು ತೊಡಗಿಸುವ ಯೋಜನೆಯನ್ನು ಪ್ರಸ್ತುತ ವರ್ಷದಿಂದ ಶಿವಮೊಗ್ಗ ಅರಣ್ಯ ವೃತ್ತದಲ್ಲಿ ಜಾರಿಗೆ ತರುವುದಾಗಿ ಅರಣ್ಯ ಸಚಿವ ಎಸ್.ವೈ.ಮೇಟಿ ಹೇಳಿದ್ದಾರೆ.</p>.<p>ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಯೋಜನೆ ಅನುಷ್ಠಾನದಲ್ಲಿರುವ ಪ್ರದೇಶದಲ್ಲಿ ಗ್ರಾಮ ಮಟ್ಟದ 52 ಅರಣ್ಯ ಸಂರಕ್ಷಣಾ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಮ್ಮಿಶ್ರ ಸರ್ಕಾರ ರಚನೆ: ಹಿಂದೆ ಸರಿದ ಹೆಗಡೆ</strong></p>.<p><strong>ನವದೆಹಲಿ, ಜುಲೈ 8 (ಯುಎನ್ಐ)–</strong> ಕೇಂದ್ರದಲ್ಲಿ ಪಿ.ವಿ.ನರಸಿಂಹರಾವ್ ನೇತೃತ್ವದಲ್ಲಿ ಬಿಜೆಪಿಯೇತರ ಸಮ್ಮಿಶ್ರ ಸರ್ಕಾರ ರಚನೆಗೆ ಬೆಂಬಲ ನೀಡುವ ಕುರಿತ ತಮ್ಮ ಒಂದು ವರ್ಷ ಅವಧಿಯ ಉದ್ದೇಶಿತ ಪ್ರಚಾರವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕೈಬಿಟ್ಟಿದ್ದಾರೆ.</p>.<p>ಹೆಗಡೆ ಅವರ ಜೊತೆ ಇಂದು ಮುಂಜಾನೆ ಒಂದು ಗಂಟೆ ಕಾಲ ಸಭೆ ನಡೆಸಿದ ಜನತಾದಳದ ಹಿರಿಯ ನಾಯಕ ಬಿಜು ಪಟ್ನಾಯಕ್, ಈ ಉದ್ದೇಶವನ್ನು ಒತ್ತಾಯಿಸುವುದು ಅನವಶ್ಯಕ ಎಂಬುದನ್ನು ಹೆಗಡೆ ಅವರು ಮನಗಂಡಿದ್ದಾರೆ ಎಂದರು.</p>.<p><strong>ಗ್ರಾಮೀಣರಿಂದ ಪಶ್ಚಿಮಘಟ್ಟ ಅರಣ್ಯ ಸಂರಕ್ಷಣೆ</strong></p>.<p><strong>ಧಾರವಾಡ, ಜುಲೈ 8– </strong>ಬ್ರಿಟನ್ನಿನ ಸಾಗರೋತ್ತರ ಅಭಿವೃದ್ಧಿ ಸಂಸ್ಥೆಯ ನೆರವಿನಿಂದ ಪಶ್ಚಿಮ ಘಟ್ಟಗಳ ಅರಣ್ಯ ಅಭಿವೃದ್ಧಿ ಮತ್ತು ಸಂರಕ್ಷಣೆಯಲ್ಲಿ ಗ್ರಾಮೀಣ ಜನರನ್ನು ತೊಡಗಿಸುವ ಯೋಜನೆಯನ್ನು ಪ್ರಸ್ತುತ ವರ್ಷದಿಂದ ಶಿವಮೊಗ್ಗ ಅರಣ್ಯ ವೃತ್ತದಲ್ಲಿ ಜಾರಿಗೆ ತರುವುದಾಗಿ ಅರಣ್ಯ ಸಚಿವ ಎಸ್.ವೈ.ಮೇಟಿ ಹೇಳಿದ್ದಾರೆ.</p>.<p>ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಯೋಜನೆ ಅನುಷ್ಠಾನದಲ್ಲಿರುವ ಪ್ರದೇಶದಲ್ಲಿ ಗ್ರಾಮ ಮಟ್ಟದ 52 ಅರಣ್ಯ ಸಂರಕ್ಷಣಾ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>