ಕಲಬುರ್ಗಿ, ಜುಲೈ 18: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೆಲವು ದೋಷಗಳಿದ್ದು, ಅವುಗಳನ್ನು ನಿವಾರಿಸಿ ಸುಧಾರಣೆ ತರಲು ಸರ್ಕಾರದ ಕಾರ್ಯವೈಖರಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ಇಂದು ಇಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿರುವ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದಾಕ್ಷಣ ಈಗ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಅರ್ಥವಲ್ಲ ಎಂದರು.