ಬೆಂಗಳೂರು, ಮಾರ್ಚಿ 1– ಕರ್ನಾಟಕದಲ್ಲಿ ವೈಚಾರಿಕ ಸ್ವಾತಂತ್ರ್ಯಕ್ಕೆ ಇಂದು ಧಕ್ಕೆಯುಂಟಾಗುವ ಪರಿಸ್ಥಿತಿ ಎದುರಾಗಿದ್ದು ಅಸಹನೆ ತೀವ್ರವಾಗುತ್ತಿದೆ. ಇಂಥ ಭಯಮಿಶ್ರಿತ ವಾತಾವರಣದಲ್ಲಿ ಸೃಜನಶೀಲ ಸಾಹಿತ್ಯ ರಚನೆಯಾಗುವುದು ಸಾಧ್ಯವೇ ಇಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಯು.ಆರ್.ಅನಂತಮೂರ್ತಿ ಇಂದು ಇಲ್ಲಿ ಆತಂಕ ವ್ಯಕ್ತಪಡಿಸಿದರು.