ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ, 25–7–1994

Last Updated 24 ಜುಲೈ 2019, 16:35 IST
ಅಕ್ಷರ ಗಾತ್ರ

ಚಿತ್ರನಟ ಸುನಿಲ್ ಸಾವು; ಮಾಲಾಶ್ರೀ ಪಾರು

ಬೆಂಗಳೂರು, ಜುಲೈ 24– ಚಿತ್ರದುರ್ಗದಿಂದ 13. ಕಿ.ಮೀ. ದೂರವಿರುವ ಮಾದನಾಯ ಕನಹಳ್ಳಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ (30) ಸೇರಿದಂತೆ ಇಬ್ಬರು ಮೃತಪಟ್ಟು, ಜನಪ್ರಿಯ ತಾರೆ ಮಾಲಾಶ್ರೀ ಮತ್ತು ಸುನಿಲ್ ಸೋದರ ಗಾಯಗೊಂಡರು.

ಬೆಳಿಗ್ಗೆ 6.15ರ ಸಮಯದಲ್ಲಿ ಸುನಿಲ್ ಹಾಗೂ ಮಾಲಾಶ್ರೀ ಪ್ರಯಾಣಿಸುತ್ತಿದ್ದ ಕಾಂಟೆಸಾ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು. ಕಾರಿನ ಚಾಲಕ ಕೃಷ್ಣ ಅಲಿಯಾಸ್ ರಾಜು (26) ಸ್ಥಳದಲ್ಲೇ ಮೃತಪಟ್ಟರು. ಎರಡೂ ಕಾಲುಗಳು ಮುರಿದು ತಲೆಗೆ ತೀವ್ರವಾಗಿ ಗಾಯವಾಗಿದ್ದ ಸುನಿಲ್ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.30ರ ಸಮಯದಲ್ಲಿ ಕೊನೆಯುಸಿರೆಳೆದರು.

ಮಾಲಾಶ್ರೀ ಅವರ ತಲೆಗೆ ತೀವ್ರವಾಗಿ ಗಾಯವಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಚಿತ್ರದುರ್ಗ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸುನಿಲ್ ಸೋದರ ಸಚ್ಚಿನ್ ಅವರಿಗೂ ತೀವ್ರವಾದ ಗಾಯಗಳಾಗಿವೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಇಬ್ಬರನ್ನೂ ಇಲ್ಲಿನ ನಿಮ್ಹಾನ್ಸ್‌ಗೆ ಸೇರಿಸಲಾಗಿದೆ.

ವಿಜಾಪುರ ಜಿಲ್ಲೆಯ ಬಾಗಲಕೋಟೆಯಲ್ಲಿ ಶನಿವಾರ ಸಂಜೆ ರಸಮಂಜರಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಅವರು ಬೆಂಗಳೂರಿಗೆ ಬರುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT