ನವದೆಹಲಿ, ಆ. 5 (ಪಿಟಿಐ, ಯುಎನ್ಐ)– ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಟೈಗರ್ ಮೆಮನ್ನ ಸಹೋದರ ಯಾಕುಬ್ ಅಬ್ದುಲ್ ರಜಾಕ್ ಮೆಮನ್ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಬಂಧಿಸಿತು. ಗೃಹ ಸಚಿವ ಎಸ್.ಬಿ. ಚವಾಣ್ ಸಂಸತ್ತಿನ ಉಭಯ ಸದನಗಳಲ್ಲಿಯೂ ಈ ವಿಷಯ ತಿಳಿಸಿದರು. ಈತನಿಂದ ವಶಪಡಿಸಿಕೊಂಡ ಆಕ್ಷೇಪಾರ್ಹ ದಾಖಲೆಗಳಿಂದಾಗಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪಾಕಿಸ್ತಾನದ ಕೈವಾಡ ಇರುವುದು ಸಂದಿಗ್ದಾತೀತವಾಗಿ ಸಾಬೀತಾಗಿದೆ.