ಬೆಂಗಳೂರು, ಸೆ. 5– ಕೊಲೆ ಮೊಕದ್ದಮೆ ಒಂದರಲ್ಲಿ ಆರೋಪಿಗಳ ಜತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗೃಹ ಸಚಿವ ಚೌಡರೆಡ್ಡಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಅವರನ್ನು ಮುಖ್ಯಮಂತ್ರಿ ಅವರು ವಜಾ ಮಾಡಬೇಕು ಎಂದು ಆಗ್ರಹಪಡಿಸಿದ ಜನತಾದಳದ ಸದಸ್ಯರು ವಿಧಾನ ಸಭೆಯಲ್ಲಿ ಇಂದು ಸಭಾತ್ಯಾಗ ಮಾಡಿದರು.