ನವದೆಹಲಿ, ಡಿ. 23 (ಪಿಟಿಐ)– ನರಸಿಂಹ ರಾವ್ ನೇತೃತ್ವದ ಸರ್ಕಾರ ಷೇರು ಹಾಗೂ ಸಕ್ಕರೆ ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ಸಂಸತ್ತಿನ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದೂ ಉಭಯ ಸದನಗಳಲ್ಲಿ ಯಾವುದೇ ಕಾರ್ಯಕಲಾಪ ನಡೆಯದೆ ಅನಿರ್ದಿಷ್ಟ ಅವಧಿಗೆ ಮುಂದೂಡಲಾಯಿತು.