ಬೆಂಗಳೂರು ಪಾಲಿಕೆ ಆದಾಯ ಸೋರಿಕೆ: ತನಿಖೆಗೆ ಗೌಡರ ಆದೇಶ
ಬೆಂಗಳೂರು, ಫೆ. 17: ಬೆಂಗಳೂರು ಮಹಾನಗರ ಪಾಲಿಕೆಯಿಂದ ಪ್ರತಿಷ್ಠಿತ ವ್ಯಾಪಾರಿ ಸಂಸ್ಥೆಗಳು ಆಸ್ತಿ ತೆರಿಗೆ ವಿನಾಯಿತಿ ಪಡೆದುಕೊಂಡಿರುವುದು ಹಣ ಸೋರಿಕೆಗೆ ಕಾರಣವಾಗಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ಒಂದು ವಾರದಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.