‘ಸಂವಿಧಾನದ 44ನೇ ವಿಧಿಯ ಪ್ರಕಾರ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ತಮ್ಮ ಕರ್ತವ್ಯವನ್ನು
ಪಾಲಿಸುವಲ್ಲಿ ಇದುವರೆಗಿನ ಎಲ್ಲ ಸರ್ಕಾರಗಳು ಅಸಡ್ಡೆ ತೋರಿವೆ. ಆದ್ದರಿಂದ ಈ ವಿಷಯದಲ್ಲಿ ಗಮನಹರಿಸುವಂತೆ
ನಾವು ಭಾರತ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ನ್ಯಾಯಮೂರ್ತಿ ಕುಲದೀಪ್ ಸಿಂಗ್ ಮತ್ತು ಆರ್.ಎಂ.ಸಹಾಯ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.