<p><strong>ಸಮಾನ ನಾಗರಿಕ ಸಂಹಿತೆ ಜಾರಿ ಸುಪ್ರೀಂ ಕೋರ್ಟ್ ಸೂಚನೆ</strong></p>.<p><strong>ನವದೆಹಲಿ, ಮೇ 10 (ಪಿಟಿಐ, ಯುಎನ್ಐ)–</strong> ದೇಶದ ಎಲ್ಲ ಪ್ರಜೆಗಳಿಗೆ ಅನ್ವಯಿಸುವ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಂತೆ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪೊಂದರಲ್ಲಿ ಕೇಂದ್ರಕ್ಕೆ ಸೂಚಿಸಿತು.</p>.<p>‘ಸಂವಿಧಾನದ 44ನೇ ವಿಧಿಯ ಪ್ರಕಾರ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ತಮ್ಮ ಕರ್ತವ್ಯವನ್ನು<br />ಪಾಲಿಸುವಲ್ಲಿ ಇದುವರೆಗಿನ ಎಲ್ಲ ಸರ್ಕಾರಗಳು ಅಸಡ್ಡೆ ತೋರಿವೆ. ಆದ್ದರಿಂದ ಈ ವಿಷಯದಲ್ಲಿ ಗಮನಹರಿಸುವಂತೆ<br />ನಾವು ಭಾರತ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ನ್ಯಾಯಮೂರ್ತಿ ಕುಲದೀಪ್ ಸಿಂಗ್ ಮತ್ತು ಆರ್.ಎಂ.ಸಹಾಯ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.</p>.<p><strong>ರಾಗಿ, ಜೋಳ ಪಡಿತರ ವಿತರಣೆಗೆ ನಕಾರ</strong></p>.<p><strong>ಬೆಂಗಳೂರು, ಮೇ 10–</strong> ಪಡಿತರ ಚೀಟಿಗಳ ಮೂಲಕ ಜೋಳ ಮತ್ತು ರಾಗಿಯನ್ನೂ ಸುಲಭ ಬೆಲೆಯಲ್ಲಿ ವಿತರಣೆ ಮಾಡಬೇಕೆಂಬ ಸಲಹೆ ಕಾರ್ಯಸಾಧುವಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಖಾತೆ ಸಚಿವ ಎಸ್.ನಂಜಪ್ಪ ಇಂದು ಸ್ಪಷ್ಟಪಡಿಸಿದರು.</p>.<p>ಅಕ್ಕಿಯನ್ನು ಗಿರಣಿ ಹಂತದಲ್ಲಿಯೇ ಲೆವಿ ನೀತಿಯನ್ವಯ ಸಂಗ್ರಹಿಸಲು ಅವಕಾಶ ಇದೆ. ಆದರೆ ಜೋಳ ಮತ್ತು ರಾಗಿಯನ್ನು ಈ ರೀತಿಯಲ್ಲಿ ಸಂಗ್ರಹಿಸಲು ಅವಕಾಶ ಇಲ್ಲದ್ದರಿಂದ ಈ ತೀರ್ಮಾನಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಮಾನ ನಾಗರಿಕ ಸಂಹಿತೆ ಜಾರಿ ಸುಪ್ರೀಂ ಕೋರ್ಟ್ ಸೂಚನೆ</strong></p>.<p><strong>ನವದೆಹಲಿ, ಮೇ 10 (ಪಿಟಿಐ, ಯುಎನ್ಐ)–</strong> ದೇಶದ ಎಲ್ಲ ಪ್ರಜೆಗಳಿಗೆ ಅನ್ವಯಿಸುವ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಂತೆ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪೊಂದರಲ್ಲಿ ಕೇಂದ್ರಕ್ಕೆ ಸೂಚಿಸಿತು.</p>.<p>‘ಸಂವಿಧಾನದ 44ನೇ ವಿಧಿಯ ಪ್ರಕಾರ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ತಮ್ಮ ಕರ್ತವ್ಯವನ್ನು<br />ಪಾಲಿಸುವಲ್ಲಿ ಇದುವರೆಗಿನ ಎಲ್ಲ ಸರ್ಕಾರಗಳು ಅಸಡ್ಡೆ ತೋರಿವೆ. ಆದ್ದರಿಂದ ಈ ವಿಷಯದಲ್ಲಿ ಗಮನಹರಿಸುವಂತೆ<br />ನಾವು ಭಾರತ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ನ್ಯಾಯಮೂರ್ತಿ ಕುಲದೀಪ್ ಸಿಂಗ್ ಮತ್ತು ಆರ್.ಎಂ.ಸಹಾಯ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.</p>.<p><strong>ರಾಗಿ, ಜೋಳ ಪಡಿತರ ವಿತರಣೆಗೆ ನಕಾರ</strong></p>.<p><strong>ಬೆಂಗಳೂರು, ಮೇ 10–</strong> ಪಡಿತರ ಚೀಟಿಗಳ ಮೂಲಕ ಜೋಳ ಮತ್ತು ರಾಗಿಯನ್ನೂ ಸುಲಭ ಬೆಲೆಯಲ್ಲಿ ವಿತರಣೆ ಮಾಡಬೇಕೆಂಬ ಸಲಹೆ ಕಾರ್ಯಸಾಧುವಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಖಾತೆ ಸಚಿವ ಎಸ್.ನಂಜಪ್ಪ ಇಂದು ಸ್ಪಷ್ಟಪಡಿಸಿದರು.</p>.<p>ಅಕ್ಕಿಯನ್ನು ಗಿರಣಿ ಹಂತದಲ್ಲಿಯೇ ಲೆವಿ ನೀತಿಯನ್ವಯ ಸಂಗ್ರಹಿಸಲು ಅವಕಾಶ ಇದೆ. ಆದರೆ ಜೋಳ ಮತ್ತು ರಾಗಿಯನ್ನು ಈ ರೀತಿಯಲ್ಲಿ ಸಂಗ್ರಹಿಸಲು ಅವಕಾಶ ಇಲ್ಲದ್ದರಿಂದ ಈ ತೀರ್ಮಾನಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>