ಬೆಂಗಳೂರು, ಮೇ 12– ರಾಜ್ಯದ ವಿವಿಧೆಡೆಗಳಲ್ಲಿ ಕೆರೆ ಅಂಗಳ, ಗೋಮಾಳ, ಸ್ಮಶಾನ ಸೇರಿದಂತೆ ಭಾರೀ ಪ್ರಮಾಣದ ಸರ್ಕಾರಿ ಭೂಮಿ ಪರಭಾರೆಯಾಗಿದ್ದು, ಅದನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲೆಂದೇ ಆಯ್ದ 15 ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಎಲ್.ಜಾಲಪ್ಪ ಇಂದು ಇಲ್ಲಿ ತಿಳಿಸಿದರು.