ಬೆಂಗಳೂರು, ಜೂನ್ 26– ದಕ್ಷಿಣ ಕನ್ನಡ, ಬೆಂಗಳೂರು ನಗರ, ಬಳ್ಳಾರಿ, ಕಲ್ಬುರ್ಗಿ, ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಕೈಕೊಟ್ಟಿದೆ. ಸಕಾಲದಲ್ಲಿ ಮಳೆಯಾಗದೆ ಇರುವುದರಿಂದ ಕೃಷಿ ಚಟುವಟಿಕೆಗಳನ್ನು ಆರಂಭಿಸಲು ರೈತರು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಉಂಟಾಗಿದೆ.