ಬೆಂಗಳೂರು, ಅ. 1– ಕೃಷಿಗೆ ಕೈಗಾರಿಕೆಯ ಸ್ಥಾನಮಾನ ನೀಡುವ ಮೂಲಕ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ರೂಪಿಸಿರುವ ಮಹತ್ವಾಕಾಂಕ್ಷೆಯ ಕೃಷಿ ನೀತಿಯನ್ನು ಸರ್ಕಾರ ಅಂಗೀಕರಿಸಿದೆ. ಮುಂದಿನ ಐದು ವರ್ಷಗಳಲ್ಲಿ ವರ್ಷಕ್ಕೆ ಅಂದಾಜು 1,000 ಕೋಟಿ
ರೂಪಾಯಿ ಬಂಡವಾಳ ತೊಡಗಿಸುವ ಉದ್ದೇಶದೊಡನೆ ಈ ನೀತಿ ಜಾರಿಗಾಗಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.