<p><strong>ಬಿಜೆಪಿ ಭಿನ್ನರ ಸಮಾವೇಶ<br />ಅಹಮದಾಬಾದ್, ಸೆ. 24 (ಯುಎನ್ಐ)–</strong> ಪಕ್ಷದ ಹೈಕಮಾಂಡ್ ಎಚ್ಚರಿಕೆ ಮಧ್ಯೆಯೂ ಬಿಜೆಪಿಯ ಭಿನ್ನಮತೀಯರು ಇಂದು ಸಂಜೆ ಇಲ್ಲಿಯ ದಿನೇಶ್ ಸಭಾಂಗಣದಲ್ಲಿ ಸಮಾವೇಶ ನಡೆಸಿ, ಪಕ್ಷದಲ್ಲಿ ಹೆಚ್ಚುತ್ತಿರುವ ದಬ್ಬಾಳಿಕೆ, ಭ್ರಷ್ಟಾಚಾರ ಹಾಗೂ ಗೂಂಡಾಗಿರಿಯ ವಿರುದ್ಧ ಹೋರಾಡುವ ಪಣ ತೊಟ್ಟರು.</p>.<p>ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಮೇಯರ್ ಗೋಪಾಲಭಾಯ್ ಸೋಲಂಕಿ ಅವರ ಅಧ್ಯಕ್ಷತೆಯಲ್ಲಿ ಈ ಸಮಾ<br />ವೇಶ ಜರುಗಿತು. ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಮೋದಿ ಅವರನ್ನು ಕೂಡಲೇ ತೆಗೆದು ಹಾಕುವಂತೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದಲ್ಲದೆ ಮೋದಿ ಅವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ತನಿಖೆ ನಡೆಸುವಂತೆಯೂ ಆಗ್ರಹಪಡಿಸಲಾಯಿತು.</p>.<p><strong>ಶಾಸನಸಭೆ: ಮಹಿಳೆಗೆ ಶೇ 25 ಪ್ರಾತಿನಿಧ್ಯಕ್ಕೆ ಕ್ರಮ<br />ಮೈಸೂರು, ಸೆ. 24–</strong> ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ನೀಡಲು ನಿರ್ಧರಿಸಿರುವ ಕರ್ನಾಟಕ ಸರ್ಕಾರ, ಈ ದಿಕ್ಕಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದಿಡಲಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲೂ ಮಹಿಳೆಯರಿಗೆ<br />ಶೇ 25ರಷ್ಟು ಸ್ಥಾನಗಳನ್ನು ಮೀಸಲಿರಿಸುವ ಸಂಬಂಧ ಅವಿರೋಧ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಿಕೊಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜೆಪಿ ಭಿನ್ನರ ಸಮಾವೇಶ<br />ಅಹಮದಾಬಾದ್, ಸೆ. 24 (ಯುಎನ್ಐ)–</strong> ಪಕ್ಷದ ಹೈಕಮಾಂಡ್ ಎಚ್ಚರಿಕೆ ಮಧ್ಯೆಯೂ ಬಿಜೆಪಿಯ ಭಿನ್ನಮತೀಯರು ಇಂದು ಸಂಜೆ ಇಲ್ಲಿಯ ದಿನೇಶ್ ಸಭಾಂಗಣದಲ್ಲಿ ಸಮಾವೇಶ ನಡೆಸಿ, ಪಕ್ಷದಲ್ಲಿ ಹೆಚ್ಚುತ್ತಿರುವ ದಬ್ಬಾಳಿಕೆ, ಭ್ರಷ್ಟಾಚಾರ ಹಾಗೂ ಗೂಂಡಾಗಿರಿಯ ವಿರುದ್ಧ ಹೋರಾಡುವ ಪಣ ತೊಟ್ಟರು.</p>.<p>ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಮೇಯರ್ ಗೋಪಾಲಭಾಯ್ ಸೋಲಂಕಿ ಅವರ ಅಧ್ಯಕ್ಷತೆಯಲ್ಲಿ ಈ ಸಮಾ<br />ವೇಶ ಜರುಗಿತು. ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಮೋದಿ ಅವರನ್ನು ಕೂಡಲೇ ತೆಗೆದು ಹಾಕುವಂತೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದಲ್ಲದೆ ಮೋದಿ ಅವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ತನಿಖೆ ನಡೆಸುವಂತೆಯೂ ಆಗ್ರಹಪಡಿಸಲಾಯಿತು.</p>.<p><strong>ಶಾಸನಸಭೆ: ಮಹಿಳೆಗೆ ಶೇ 25 ಪ್ರಾತಿನಿಧ್ಯಕ್ಕೆ ಕ್ರಮ<br />ಮೈಸೂರು, ಸೆ. 24–</strong> ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ನೀಡಲು ನಿರ್ಧರಿಸಿರುವ ಕರ್ನಾಟಕ ಸರ್ಕಾರ, ಈ ದಿಕ್ಕಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದಿಡಲಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲೂ ಮಹಿಳೆಯರಿಗೆ<br />ಶೇ 25ರಷ್ಟು ಸ್ಥಾನಗಳನ್ನು ಮೀಸಲಿರಿಸುವ ಸಂಬಂಧ ಅವಿರೋಧ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಿಕೊಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>