<p><strong>ರಾಜ್ಯದ ಎಲ್ಲ ಅಕ್ರಮ ಕಟ್ಟಡ ಸಕ್ರಮ</strong></p>.<p><strong>ಬೆಂಗಳೂರು, ಅ. 22– </strong>ಬರುವ ನ. 1ರ ಒಳಗೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯ ಅಕ್ರಮ ಕಟ್ಟಡ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಇಂದು ಘೋಷಿಸಿದರು.</p>.<p>ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯ ಬಗ್ಗೆ ಕೇಂದ್ರ ಸಚಿವ ಜಗನ್ನಾಥ ಮಿಶ್ರಾ ಅವರು ಆಕ್ಷೇಪ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿದ ದೇವೇಗೌಡರು, ‘ಯಾರು ಏನಾದರೂ ತಮಟೆ ಬಾರಿಸಿಕೊಂಡು ಹೋಗಲಿ, ನಾವು ನಮ್ಮ ಕೆಲಸ ಮುಂದುವರಿಸ್ತೇವೆ’ ಎಂದರು.</p>.<p><strong>ಬಿಜೆಪಿ ಸರ್ಕಾರ ರಚನೆ ತಪ್ಪಿಸಲು ಯತ್ನ</strong></p>.<p><strong>ಲಖನೌ, ಅ. 22 (ಯುಎನ್ಐ)– </strong>ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರು ಈ ತಿಂಗಳ 25ರಂದು ಪಕ್ಷದ ಶಾಸಕರ ತುರ್ತು ಸಭೆ ಕರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯದ ಎಲ್ಲ ಅಕ್ರಮ ಕಟ್ಟಡ ಸಕ್ರಮ</strong></p>.<p><strong>ಬೆಂಗಳೂರು, ಅ. 22– </strong>ಬರುವ ನ. 1ರ ಒಳಗೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯ ಅಕ್ರಮ ಕಟ್ಟಡ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಇಂದು ಘೋಷಿಸಿದರು.</p>.<p>ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯ ಬಗ್ಗೆ ಕೇಂದ್ರ ಸಚಿವ ಜಗನ್ನಾಥ ಮಿಶ್ರಾ ಅವರು ಆಕ್ಷೇಪ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿದ ದೇವೇಗೌಡರು, ‘ಯಾರು ಏನಾದರೂ ತಮಟೆ ಬಾರಿಸಿಕೊಂಡು ಹೋಗಲಿ, ನಾವು ನಮ್ಮ ಕೆಲಸ ಮುಂದುವರಿಸ್ತೇವೆ’ ಎಂದರು.</p>.<p><strong>ಬಿಜೆಪಿ ಸರ್ಕಾರ ರಚನೆ ತಪ್ಪಿಸಲು ಯತ್ನ</strong></p>.<p><strong>ಲಖನೌ, ಅ. 22 (ಯುಎನ್ಐ)– </strong>ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರು ಈ ತಿಂಗಳ 25ರಂದು ಪಕ್ಷದ ಶಾಸಕರ ತುರ್ತು ಸಭೆ ಕರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>