<p><strong>ಸಾರಿಗೆ ಸಂಸ್ಥೆ ಸಿಬ್ಬಂದಿ ಸಂಪು,ರಾಜ್ಯದಲ್ಲಿ ಸಂಚಾರ ಅಸ್ತವ್ಯಸ್ತ</strong></p>.<p><strong>ಬೆಂಗಳೂರು, ಅ. 16– </strong>ಬೇಡಿಕೆಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಇಂದಿನಿಂದ ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸತ್ಯಾಗ್ರಹ ಬೆಂಬಲಿಸಿ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದಾದ್ಯಂತ ಸಂಚಾರ ವ್ಯವಸ್ಥೆಅಸ್ತವ್ಯಸ್ತಗೊಂಡಿದೆ.</p>.<p>ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ಸೌಕರ್ಯ<br />ಅಸ್ತವ್ಯಸ್ತವಾಗಿರುವ ಕಡೆಗಳಲ್ಲಿಪ್ರಯಾಣಿಕರನ್ನು ಮುಕ್ತವಾಗಿ ಕರೆದೊಯ್ಯುವ ಅನುಮತಿಯನ್ನು ಖಾಸಗಿ ವಾಹನಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯ ಈ ರಾತ್ರಿ ಇಲ್ಲಿ ಪ್ರಕಟಿಸಿದರು.</p>.<p><strong>ನಟ ತೂಗುದೀಪ ಶ್ರೀನಿವಾಸ್ ನಿಧನ</strong></p>.<p><strong>ಮೈಸೂರು, ಅ. 16–</strong> ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಹಿರಿಯ ಕಲಾವಿದ ತೂಗುದೀಪ ಶ್ರೀನಿವಾಸ್ ಅವರು ಇಲ್ಲಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.</p>.<p>ಕನ್ನಡದ ‘ತೂಗುದೀಪ’ ಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ ಶ್ರೀನಿವಾಸ್ ಅವರು ಉತ್ತಮ ಅಭಿನಯದಿಂದಾಗಿ ‘ತೂಗುದೀಪ ಶ್ರೀನಿವಾಸ್’ ಎಂದೇ ಜನಪ್ರಿಯರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾರಿಗೆ ಸಂಸ್ಥೆ ಸಿಬ್ಬಂದಿ ಸಂಪು,ರಾಜ್ಯದಲ್ಲಿ ಸಂಚಾರ ಅಸ್ತವ್ಯಸ್ತ</strong></p>.<p><strong>ಬೆಂಗಳೂರು, ಅ. 16– </strong>ಬೇಡಿಕೆಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಇಂದಿನಿಂದ ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸತ್ಯಾಗ್ರಹ ಬೆಂಬಲಿಸಿ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದಾದ್ಯಂತ ಸಂಚಾರ ವ್ಯವಸ್ಥೆಅಸ್ತವ್ಯಸ್ತಗೊಂಡಿದೆ.</p>.<p>ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ಸೌಕರ್ಯ<br />ಅಸ್ತವ್ಯಸ್ತವಾಗಿರುವ ಕಡೆಗಳಲ್ಲಿಪ್ರಯಾಣಿಕರನ್ನು ಮುಕ್ತವಾಗಿ ಕರೆದೊಯ್ಯುವ ಅನುಮತಿಯನ್ನು ಖಾಸಗಿ ವಾಹನಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯ ಈ ರಾತ್ರಿ ಇಲ್ಲಿ ಪ್ರಕಟಿಸಿದರು.</p>.<p><strong>ನಟ ತೂಗುದೀಪ ಶ್ರೀನಿವಾಸ್ ನಿಧನ</strong></p>.<p><strong>ಮೈಸೂರು, ಅ. 16–</strong> ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಹಿರಿಯ ಕಲಾವಿದ ತೂಗುದೀಪ ಶ್ರೀನಿವಾಸ್ ಅವರು ಇಲ್ಲಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.</p>.<p>ಕನ್ನಡದ ‘ತೂಗುದೀಪ’ ಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ ಶ್ರೀನಿವಾಸ್ ಅವರು ಉತ್ತಮ ಅಭಿನಯದಿಂದಾಗಿ ‘ತೂಗುದೀಪ ಶ್ರೀನಿವಾಸ್’ ಎಂದೇ ಜನಪ್ರಿಯರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>