‘ನೇಮಕಾತಿ, ರೈಲ್ವೆ ನಿಲ್ದಾಣಗಳಲ್ಲಿರುವ ಹೋಟೆಲ್, ಅಂಗಡಿಗಳ ಗುತ್ತಿಗೆ ನೀಡುವಾಗ ಸ್ಥಳೀಯ ಜನರನ್ನು ನಿರ್ಲಕ್ಷಿಸಿ, ನೆರೆ ರಾಜ್ಯದ ಜನರಿಗೇ ಈ ಎಲ್ಲ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂಬ ದೂರುಗಳು ಎಲ್ಲ ಕಡೆ ಕೇಳಿ ಬರುತ್ತಿವೆ. ರೈಲ್ವೆ ಮಂಡಳಿಯ ಅಧಿಕಾರಿಗಳು ಸ್ಥಳೀಯ ಜನರ ಭಾವನೆಗಳನ್ನು ಅರಿತು ಕೆಲಸ ಮಾಡಬೇಕಲ್ಲದೆ ಮತ್ತೆ ಇಂಥ ದೂರುಗಳು ಕೇಳಿ ಬರದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ಸೂಚನೆ ನೀಡಿದರು.