ದಳ ಜತೆ ಕಾಂಗೈ, ಕೆಸಿಪಿ ಹೊಂದಾಣಿಕೆ: ಬಿಜೆಪಿ ಆರೋಪ
ಬೆಂಗಳೂರು, ಆ. 10– ಹಿಂದೆ ಅಧಿಕಾರದಲ್ಲಿ ಇದ್ದ ಕಾಂಗೈ ಮತ್ತು ಕರ್ನಾಟಕ ಕಾಂಗ್ರೆಸ್ ಪಕ್ಷ ಈಗಿನ ಸರ್ಕಾರದೊಂದಿಗೆ ಹೊಂದಾಣಿಕೆಯ ರಾಜಕೀಯ ಮಾಡುತ್ತಿರುವುದು ಮೂರು ದಿನ ನಡೆದ ವಿಧಾನಮಂಡಲ ಅಧಿವೇಶನದ ಕಲಾಪದಿಂದ ರಾಜ್ಯದ ಜನತೆಗೆ ಗೊತ್ತಾದಂತಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಇಲ್ಲಿ ಆಪಾದಿಸಿದರು.