ರಾಷ್ಟ್ರಧ್ವಜವನ್ನು ರಾಜಕೀಯ ಪ್ರಶ್ನೆಯಾಗಿ ಮಾಡುವುದು ಸರಿಯಲ್ಲ ಎಂದು ಸಂಸದೀಯ ವ್ಯವಹಾರ ರಾಜ್ಯ ಸಚಿವೆ ಮಾರ್ಗರೆಟ್ ಆಳ್ವ ಅವರು ಹೇಳಿದರು. ಹುಬ್ಬಳ್ಳಿ
ಘಟನೆಗಳ ಕುರಿತು ರಾಜ್ಯಸಭೆಯಲ್ಲಿ ನಾಲ್ಕು ಗಂಟೆ ಕಾಲ ನಡೆದ ಚರ್ಚೆಗಳಿಗೆ ಉತ್ತರ ನೀಡಿದ ಸಚಿವರು, ಧರ್ಮನಿರಪೇಕ್ಷತೆಯು ದೇಶದ ರಾಜಕೀಯದ ಮೂಲ
ಮಂತ್ರವಾಗಿದೆ. ಅದರಿಂದ ನಾವು ವಿಚಲಿತರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.