ಬೆಂಗಳೂರು, ಡಿ. 1– ಕೆಲವು ಹಿಂಸಾತ್ಮಕ ಘಟನೆಗಳೊಂದಿಗೆ ರಾಜ್ಯದ ಹತ್ತು ಜಿಲ್ಲೆಗಳ 109 ಕ್ಷೇತ್ರಗಳಲ್ಲಿ ಎರಡನೇ ಹಾಗೂ ಅಂತಿಮ ಸುತ್ತಿನ ವಿಧಾನಸಭಾ ಚುನಾವಣೆ ಕೊನೆಗೊಂಡು ಶೇಕಡ 65ರಷ್ಟು ಮತದಾನ ನಡೆದಿದೆ. ಕಲ್ಬುರ್ಗಿ ಜಿಲ್ಲೆ ಸೇಡಂನಲ್ಲಿ ವ್ಯಕ್ತಿ
ಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಅಮಾನುಷವಾಗಿ ಕಲ್ಲುಗಳಿಂದ ಜಜ್ಜಿ ಕೊಂದಿದೆ. ಔರಾದ್ ಅಭ್ಯರ್ಥಿಯೊಬ್ಬರ ಪುತ್ರ ಸ್ವಯಂ ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.