ಬೆಂಗಳೂರು, ಸೆ. 13– ನ್ಯಾಯಾಲಯ ನಿಂದನೆಗಾಗಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆಗೆ ಒಳಗಾಗಿರುವ ಹಿರಿಯ ಐಎಎಸ್ ಅಧಿಕಾರಿ, ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಕೆ.ವಾಸುದೇವನ್ ಇಂದು ಬೆಳಿಗ್ಗೆ ಬೆಂಗಳೂರಿನ ಪೊಲೀಸ್ ಕಮಿಷನರ್ ಟಿ. ಶ್ರೀನಿವಾಸಲು ಮುಂದೆ ಶರಣಾದರು. ತಕ್ಷಣವೇ ಅವರನ್ನು ಬಂಧಿಸಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.