<p><strong>ಸಂಪುಟ ವಿಸ್ತರಣೆಗೆ ಗೌಡರ ಕಸರತ್ತು</strong></p>.<p>ಬೆಂಗಳೂರು, ಡಿ. 12– ಮುಖ್ಯಮಂತ್ರಿಯಾಗಿ ಭಾನುವಾರ ಅಧಿಕಾರ ವಹಿಸಿಕೊಂಡ ಎಚ್.ಡಿ. ದೇವೇಗೌಡ ಅವರು ಗುರುವಾರ (ಡಿಸೆಂಬರ್ 15) ಸಂಪುಟ ವಿಸ್ತರಿಸುವ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ.</p>.<p>ಆಂಧ್ರ ಪ್ರದೇಶದಲ್ಲಿ ಇಂದು ಅಧಿಕಾರಗ್ರಹಣ ಮಾಡುತ್ತಿರುವ ಎನ್.ಟಿ.ರಾಮರಾವ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬೇಕಾಗಿದ್ದರೂ ಪಕ್ಷದ ವರಿಷ್ಠರು ತೆರಳಿರುವುದರಿಂದ ಗೌಡರು ಮಂತ್ರಿಮಂಡಲ ರಚನೆಯಲ್ಲಿ ತೊಡಗಿದ್ದಾರೆ.</p>.<p><strong>ಆಂಧ್ರ: ಪಾನ ನಿಷೇಧ ಜಾರಿಗೆ ಕ್ರಮ</strong></p>.<p>ಹೈದರಾಬಾದ್, ಡಿ. 12– (ಪಿಟಿಐ, ಯುಎನ್ಐ)– ಮೂರನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ತೆಲುಗು ದೇಶಂ ನಾಯಕ ಎನ್.ಟಿ. ರಾಮರಾವ್ ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಯಂತೆ ರಾಜ್ಯದಲ್ಲಿ ಕೂಡಲೇ ಸಂಪೂರ್ಣ ಪಾನ ನಿಷೇಧ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.</p>.<p>ಇಲ್ಲಿನ ಲಾಲ್ ಬಹದ್ದೂರ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅವರು, ಸಭಿಕರನ್ನುದ್ದೇಶಿಸಿ ಮಾತನಾಡಿದರು.</p>.<p><strong>ಕುಪ್ಪಳಿ ಸುತ್ತ ಕುವೆಂಪು ಸ್ಮಾರಕ ಜೈವಿಕ ಧಾಮ</strong></p>.<p>ಮೈಸೂರು, ಡಿ. 12 – ದಿವಂಗತ ಕುವೆಂಪು ಅವರ ಪ್ರಕೃತಿ ಪ್ರೇಮವನ್ನು ಅರ್ಥ ಮಾಡಿಕೊಂಡು ಈ ದಿಕ್ಕಿನಲ್ಲಿ ಅವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವವಾಗಿ ಕರ್ನಾಟಕ ಸರ್ಕಾರ ಕುಪ್ಪಳಿ ಸುತ್ತಮುತ್ತಲಿನ ಮೂರು ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶವನ್ನು ‘ಕುವೆಂಪು ಸ್ಮಾರಕ ಜೈವಿಕ ಧಾಮ’ ಎಂದು ಘೋಷಿಸಿದೆ.</p>.<p>ಈ ಬಗ್ಗೆ ರಾಜ್ಯಪಾಲರು ಸುಗ್ರೀವಾಜ್ಞೆಯೊಂದನ್ನು ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಪುಟ ವಿಸ್ತರಣೆಗೆ ಗೌಡರ ಕಸರತ್ತು</strong></p>.<p>ಬೆಂಗಳೂರು, ಡಿ. 12– ಮುಖ್ಯಮಂತ್ರಿಯಾಗಿ ಭಾನುವಾರ ಅಧಿಕಾರ ವಹಿಸಿಕೊಂಡ ಎಚ್.ಡಿ. ದೇವೇಗೌಡ ಅವರು ಗುರುವಾರ (ಡಿಸೆಂಬರ್ 15) ಸಂಪುಟ ವಿಸ್ತರಿಸುವ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ.</p>.<p>ಆಂಧ್ರ ಪ್ರದೇಶದಲ್ಲಿ ಇಂದು ಅಧಿಕಾರಗ್ರಹಣ ಮಾಡುತ್ತಿರುವ ಎನ್.ಟಿ.ರಾಮರಾವ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬೇಕಾಗಿದ್ದರೂ ಪಕ್ಷದ ವರಿಷ್ಠರು ತೆರಳಿರುವುದರಿಂದ ಗೌಡರು ಮಂತ್ರಿಮಂಡಲ ರಚನೆಯಲ್ಲಿ ತೊಡಗಿದ್ದಾರೆ.</p>.<p><strong>ಆಂಧ್ರ: ಪಾನ ನಿಷೇಧ ಜಾರಿಗೆ ಕ್ರಮ</strong></p>.<p>ಹೈದರಾಬಾದ್, ಡಿ. 12– (ಪಿಟಿಐ, ಯುಎನ್ಐ)– ಮೂರನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ತೆಲುಗು ದೇಶಂ ನಾಯಕ ಎನ್.ಟಿ. ರಾಮರಾವ್ ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಯಂತೆ ರಾಜ್ಯದಲ್ಲಿ ಕೂಡಲೇ ಸಂಪೂರ್ಣ ಪಾನ ನಿಷೇಧ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.</p>.<p>ಇಲ್ಲಿನ ಲಾಲ್ ಬಹದ್ದೂರ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅವರು, ಸಭಿಕರನ್ನುದ್ದೇಶಿಸಿ ಮಾತನಾಡಿದರು.</p>.<p><strong>ಕುಪ್ಪಳಿ ಸುತ್ತ ಕುವೆಂಪು ಸ್ಮಾರಕ ಜೈವಿಕ ಧಾಮ</strong></p>.<p>ಮೈಸೂರು, ಡಿ. 12 – ದಿವಂಗತ ಕುವೆಂಪು ಅವರ ಪ್ರಕೃತಿ ಪ್ರೇಮವನ್ನು ಅರ್ಥ ಮಾಡಿಕೊಂಡು ಈ ದಿಕ್ಕಿನಲ್ಲಿ ಅವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವವಾಗಿ ಕರ್ನಾಟಕ ಸರ್ಕಾರ ಕುಪ್ಪಳಿ ಸುತ್ತಮುತ್ತಲಿನ ಮೂರು ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶವನ್ನು ‘ಕುವೆಂಪು ಸ್ಮಾರಕ ಜೈವಿಕ ಧಾಮ’ ಎಂದು ಘೋಷಿಸಿದೆ.</p>.<p>ಈ ಬಗ್ಗೆ ರಾಜ್ಯಪಾಲರು ಸುಗ್ರೀವಾಜ್ಞೆಯೊಂದನ್ನು ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>