ಜಮ್ಮು, ಜ. 26– ಗಣರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಇಂದು ಸರಣಿ ಬಾಂಬ್ ಸ್ಫೋಟ ಸಂಭವಿಸಿ ರಾಜ್ಯಪಾಲ ಜನರಲ್ ಕೆ.ವಿ. ಕೃಷ್ಣರಾವ್ ಹಾಗೂ ಸೇನಾಪಡೆಯ ಉತ್ತರ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸುರಿಂದರ್ ಸಿಂಗ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾದರು. ಆದರೆ ರಾಜ್ಯಪಾಲರ ಅಂಗರಕ್ಷಕರಾಗಿದ್ದ ಮೂವರು ಬ್ಲಾಕ್ ಕ್ಯಾಟ್ ಕಮಾಂಡೊಗಳೂ ಸೇರಿದಂತೆ 8 ಮಂದಿ ಮೃತಪಟ್ಟು ಸುಮಾರು 100 ಮಂದಿ ಗಾಯಗೊಂಡರು.