ಬೆಂಗಳೂರು, ಅ.10– ನನ್ನ ಆಡಳಿತ ಅವಧಿಯಲ್ಲಿ ನಾನು ತಮಿಳುನಾಡಿಗೆ ಐದು ಟಿಎಂಸಿ ನೀರು ಬಿಟ್ಟಿಲ್ಲ ಎನ್ನುವುದು ಸಾಬೀತಾದಲ್ಲಿ ನಾನು ಸಕ್ರಿಯ ರಾಜಕಾರಣದಿಂದಲೇ ನಿವೃತ್ತನಾಗುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ದೇವೇಗೌಡರ ಮಾತು ಸುಳ್ಳೆಂದಾದಲ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು’ ಎಂದು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು ಇಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರಿಗೆ ಸವಾಲು ಹಾಕಿದ್ದಾರೆ.