ನಗರದ ಬಹಳಷ್ಟು ಶ್ರೀಮಂತರು ಸಣ್ಣ ಕಟ್ಟಡಗಳನ್ನು ನಿರ್ಮಿಸಲು ಪರವಾನಗಿಪಡೆದು, ಆಕ್ರಮವಾಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ ತೆರಿಗೆಯನ್ನೂ ಹೆಚ್ಚಿಗೆ ನೀಡುತ್ತಿಲ್ಲ. ಈ ಎಲ್ಲ ತೆರಿಗೆ ವಂಚನೆ ಪ್ರಕರಣಗಳಲ್ಲಿ ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಶಾಮೀಲಾಗಿದ್ದು, ಸಂಬಂಧಪಟ್ಟ ಎಲ್ಲರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸುವುದು ಎಂದು ಅವರು ಘೋಷಿಸಿದರು.