<p><strong>ಕೊಜೆಂಟ್ರಿಕ್ಸ್ ತಿರಸ್ಕರಿಸುವ ಪ್ರಶ್ನೆಯೇ ಇಲ್ಲ – ದೇವೇಗೌಡ</strong></p>.<p><strong>ಬೆಂಗಳೂರು, ಆ. 6– </strong>ಕೊಜೆಂಟ್ರಿಕ್ಸ್ ವಿದ್ಯುತ್ ಯೋಜನೆಯನ್ನು ತಿರಸ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ನಿಲುವನ್ನು ಇಂದು ಇಲ್ಲಿ ಪುನರುಚ್ಚರಿಸಿದರು.</p>.<p>ಇಂತಹ ಯೋಜನಾ ಘಟಕಗಳಿಂದ ಸಮುದ್ರಕ್ಕೆ ಕಲುಷಿತ ನೀರು ಹರಿದು ಅಲ್ಲಿಯ ಜಲಚರಗಳಿಗೆ ಕುತ್ತು ಬರುವ ಸಂಭವವಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅದನ್ನು ತಡೆಯುವ ಸಲುವಾಗಿ ಸಿಂಗಪುರದ ತಂತ್ರಜ್ಞರನ್ನು ರಾಜ್ಯಕ್ಕೆ ಆಹ್ವಾನಿಸಲಾಗಿದ್ದು ಅವರು ಸದ್ಯದಲ್ಲೇ ಬರುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.</p>.<p>ಕೊಜೆಂಟ್ರಿಕ್ಸ್ ಯೋಜನೆಯ ಹಿಂದೆ ‘ಕಿಕ್ ಬ್ಯಾಕ್’ (ರುಷುವತ್ತು) ನಡೆದಿದೆ ಎಂಬ ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಅವರು ‘ಕಿಕ್ಕೂ ಇಲ್ಲ ಬ್ಯಾಕೂ ಇಲ್ಲ. ಅನುಭವ ಇರುವವರು ಹೇಳ್ತಾರೆ’ ಎಂದು ಚುಚ್ಚಿ ಹೇಳಿದರು.</p>.<p><strong>ನಗರದ ಆಸ್ತಿ ತೆರಿಗೆ ವಂಚನೆ ಡಿಜಿಐ ತನಿಖೆ</strong></p>.<p><strong>ಬೆಂಗಳೂರು, ಆ.6– </strong>ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಆಸ್ತಿ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಎರಡು ವಾರದೊಳಗೆ ಡಿಜಿಐ ಮಟ್ಟದ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ಇಂದು ಇಲ್ಲಿ ಪ್ರಕಟಿಸಿದರು.</p>.<p>ನಗರದ ಬಹಳಷ್ಟು ಶ್ರೀಮಂತರು ಸಣ್ಣ ಕಟ್ಟಡಗಳನ್ನು ನಿರ್ಮಿಸಲು ಪರವಾನಗಿಪಡೆದು, ಆಕ್ರಮವಾಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ ತೆರಿಗೆಯನ್ನೂ ಹೆಚ್ಚಿಗೆ ನೀಡುತ್ತಿಲ್ಲ. ಈ ಎಲ್ಲ ತೆರಿಗೆ ವಂಚನೆ ಪ್ರಕರಣಗಳಲ್ಲಿ ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಶಾಮೀಲಾಗಿದ್ದು, ಸಂಬಂಧಪಟ್ಟ ಎಲ್ಲರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸುವುದು ಎಂದು ಅವರು ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಜೆಂಟ್ರಿಕ್ಸ್ ತಿರಸ್ಕರಿಸುವ ಪ್ರಶ್ನೆಯೇ ಇಲ್ಲ – ದೇವೇಗೌಡ</strong></p>.<p><strong>ಬೆಂಗಳೂರು, ಆ. 6– </strong>ಕೊಜೆಂಟ್ರಿಕ್ಸ್ ವಿದ್ಯುತ್ ಯೋಜನೆಯನ್ನು ತಿರಸ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ನಿಲುವನ್ನು ಇಂದು ಇಲ್ಲಿ ಪುನರುಚ್ಚರಿಸಿದರು.</p>.<p>ಇಂತಹ ಯೋಜನಾ ಘಟಕಗಳಿಂದ ಸಮುದ್ರಕ್ಕೆ ಕಲುಷಿತ ನೀರು ಹರಿದು ಅಲ್ಲಿಯ ಜಲಚರಗಳಿಗೆ ಕುತ್ತು ಬರುವ ಸಂಭವವಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅದನ್ನು ತಡೆಯುವ ಸಲುವಾಗಿ ಸಿಂಗಪುರದ ತಂತ್ರಜ್ಞರನ್ನು ರಾಜ್ಯಕ್ಕೆ ಆಹ್ವಾನಿಸಲಾಗಿದ್ದು ಅವರು ಸದ್ಯದಲ್ಲೇ ಬರುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.</p>.<p>ಕೊಜೆಂಟ್ರಿಕ್ಸ್ ಯೋಜನೆಯ ಹಿಂದೆ ‘ಕಿಕ್ ಬ್ಯಾಕ್’ (ರುಷುವತ್ತು) ನಡೆದಿದೆ ಎಂಬ ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಅವರು ‘ಕಿಕ್ಕೂ ಇಲ್ಲ ಬ್ಯಾಕೂ ಇಲ್ಲ. ಅನುಭವ ಇರುವವರು ಹೇಳ್ತಾರೆ’ ಎಂದು ಚುಚ್ಚಿ ಹೇಳಿದರು.</p>.<p><strong>ನಗರದ ಆಸ್ತಿ ತೆರಿಗೆ ವಂಚನೆ ಡಿಜಿಐ ತನಿಖೆ</strong></p>.<p><strong>ಬೆಂಗಳೂರು, ಆ.6– </strong>ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಆಸ್ತಿ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಎರಡು ವಾರದೊಳಗೆ ಡಿಜಿಐ ಮಟ್ಟದ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ಇಂದು ಇಲ್ಲಿ ಪ್ರಕಟಿಸಿದರು.</p>.<p>ನಗರದ ಬಹಳಷ್ಟು ಶ್ರೀಮಂತರು ಸಣ್ಣ ಕಟ್ಟಡಗಳನ್ನು ನಿರ್ಮಿಸಲು ಪರವಾನಗಿಪಡೆದು, ಆಕ್ರಮವಾಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ ತೆರಿಗೆಯನ್ನೂ ಹೆಚ್ಚಿಗೆ ನೀಡುತ್ತಿಲ್ಲ. ಈ ಎಲ್ಲ ತೆರಿಗೆ ವಂಚನೆ ಪ್ರಕರಣಗಳಲ್ಲಿ ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಶಾಮೀಲಾಗಿದ್ದು, ಸಂಬಂಧಪಟ್ಟ ಎಲ್ಲರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸುವುದು ಎಂದು ಅವರು ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>