ನವದೆಹಲಿ, ಸೆ. 6– ಸದ್ಯದಲ್ಲಿಯೇ ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಯುವುದರಿಂದ ಮುಖ್ಯ ಚುನಾವಣಾ ಕಮೀಷನರ್ ಟಿ.ಎನ್. ಶೇಷನ್ ಅವರ ಜತೆ ಘರ್ಷಣೆಗೆ ಅವಕಾಶ ಕೊಡದಂತೆ ನಡೆದುಕೊಳ್ಳಬೇಕೆಂದು ಪ್ರಧಾನಿ ಹಾಗೂ ಕಾಂಗೈ ಅಧ್ಯಕ್ಷ ಪಿ.ವಿ. ನರಸಿಂಹರಾವ್ ಅವರು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕಾಂಗೈ ಮುಖಂಡರುಗಳಿಗೆ ಸೂಚಿಸಿರುವುದಾಗಿ ಗೊತ್ತಾಗಿದೆ.