ನವದೆಹಲಿ, ಫೆ. 6 (ಪಿಟಿಐ)– ಶಿಸ್ತು ಉಲ್ಲಂಘನೆ ಆರೋಪ ಕುರಿತಂತೆ ತಮ್ಮ ವಿರುದ್ಧ ಅಂತಿಮ ನಿರ್ಣಯ ಕೈಗೊಳ್ಳುವ ಮುನ್ನ ಪಕ್ಷದ ಕಾರ್ಯಕಾರಿ ಸಮಿತಿ ಮುಂದೆ ಖುದ್ದಾಗಿ ವಿವರಣೆ ನೀಡಲು ಅವಕಾಶ ನೀಡಬೇಕು ಎಂದು ಪಕ್ಷದಿಂದ ಅಮಾನತುಗೊಂಡಿರುವ ಕೇಂದ್ರದ ಮಾಜಿ ಸಚಿವ ಅರ್ಜುನ್ ಸಿಂಗ್ ಅವರು ಎಐಸಿಸಿ ಅಧ್ಯಕ್ಷ ಪಿ.ವಿ. ನರಸಿಂಹ ರಾವ್ ಅವರನ್ನು ಕೋರಿದ್ದಾರೆ.