<p>ಪ್ರಣವ್ಗೆ ವಿದೇಶಾಂಗ ವ್ಯವಹಾರ ಸಿಂಧ್ಯಾಗೆ ಮಾನವ ಸಂಪನ್ಮೂಲ</p>.<p><strong>ನವದೆಹಲಿ, ಫೆ. 10 (ಪಿಟಿಐ):</strong> ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿ, ಕೆಲವು ಸಚಿವರ ಖಾತೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಪ್ರಣವ್ ಮುಖರ್ಜಿ ಅವರು ಈಗ ವಾಣಿಜ್ಯ ಖಾತೆಯ ಬದಲಿಗೆ ವಿದೇಶಾಂಗ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ.</p>.<p>ಅಜಿತ್ ಸಿಂಗ್ ಅವರಿಗೆ ಆಹಾರ ಖಾತೆ ನೀಡಲಾಗಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಮಾಧವ ರಾವ್ ಸಿಂಧ್ಯಾ ಅವರಿಗೆ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ, ಸಾರ್ವಜನಿಕ ವಿತರಣೆ ಖಾತೆ ಬೂಟಾ ಸಿಂಗ್ ಅವರಿಗೆ ಲಭಿಸಿದೆ.</p>.<p><strong>ಬೇಡ್ತಿ ಯೋಜನೆ ಸದ್ಯಕ್ಕೆ ರದ್ದು</strong></p>.<p><strong>ಹುಬ್ಬಳ್ಳಿ, ಫೆ. 10:</strong> ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರವಾದಿಗಳ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಬೇಡ್ತಿ ವಿದ್ಯುಚ್ಛಕ್ತಿ ಯೋಜನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಇಂದು ಇಲ್ಲಿ ತಿಳಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿನ ಕೈಗಾ ವಿದ್ಯುತ್ ಯೋಜನೆ ಮುಗಿದ ನಂತರ ಉತ್ಪಾದನೆಯಾಗುವ ವಿದ್ಯುಚ್ಛಕ್ತಿಯನ್ನು ಬಳಸಿಕೊಳ್ಳಲು ಕೈಗಾದಿಂದ ಶಿರಸಿವರೆಗೆ ಈಗ ವಿದ್ಯುತ್ ತಂತಿ ಮಾರ್ಗ ಎಳೆಯಲಾಗುತ್ತಿದೆ. ಈ ಕಾರ್ಯಕ್ಕಾಗಿ ಕಾಡು ನಾಶ ಮಾಡಬೇಡಿ ಎಂದು ಸೂಚಿಸಲಾಗಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಣವ್ಗೆ ವಿದೇಶಾಂಗ ವ್ಯವಹಾರ ಸಿಂಧ್ಯಾಗೆ ಮಾನವ ಸಂಪನ್ಮೂಲ</p>.<p><strong>ನವದೆಹಲಿ, ಫೆ. 10 (ಪಿಟಿಐ):</strong> ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿ, ಕೆಲವು ಸಚಿವರ ಖಾತೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಪ್ರಣವ್ ಮುಖರ್ಜಿ ಅವರು ಈಗ ವಾಣಿಜ್ಯ ಖಾತೆಯ ಬದಲಿಗೆ ವಿದೇಶಾಂಗ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ.</p>.<p>ಅಜಿತ್ ಸಿಂಗ್ ಅವರಿಗೆ ಆಹಾರ ಖಾತೆ ನೀಡಲಾಗಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಮಾಧವ ರಾವ್ ಸಿಂಧ್ಯಾ ಅವರಿಗೆ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ, ಸಾರ್ವಜನಿಕ ವಿತರಣೆ ಖಾತೆ ಬೂಟಾ ಸಿಂಗ್ ಅವರಿಗೆ ಲಭಿಸಿದೆ.</p>.<p><strong>ಬೇಡ್ತಿ ಯೋಜನೆ ಸದ್ಯಕ್ಕೆ ರದ್ದು</strong></p>.<p><strong>ಹುಬ್ಬಳ್ಳಿ, ಫೆ. 10:</strong> ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರವಾದಿಗಳ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಬೇಡ್ತಿ ವಿದ್ಯುಚ್ಛಕ್ತಿ ಯೋಜನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಇಂದು ಇಲ್ಲಿ ತಿಳಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿನ ಕೈಗಾ ವಿದ್ಯುತ್ ಯೋಜನೆ ಮುಗಿದ ನಂತರ ಉತ್ಪಾದನೆಯಾಗುವ ವಿದ್ಯುಚ್ಛಕ್ತಿಯನ್ನು ಬಳಸಿಕೊಳ್ಳಲು ಕೈಗಾದಿಂದ ಶಿರಸಿವರೆಗೆ ಈಗ ವಿದ್ಯುತ್ ತಂತಿ ಮಾರ್ಗ ಎಳೆಯಲಾಗುತ್ತಿದೆ. ಈ ಕಾರ್ಯಕ್ಕಾಗಿ ಕಾಡು ನಾಶ ಮಾಡಬೇಡಿ ಎಂದು ಸೂಚಿಸಲಾಗಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>