ಬೆಂಗಳೂರು, ಫೆ. 12: ರೈತರ ಸಾಲದ ಬಡ್ಡಿ ಮನ್ನಾ ಹಾಗೂ ಅಗ್ಗದ ದರದಲ್ಲಿ ಅಕ್ಕಿ ವಿತರಣೆಯಂಥ ಜನಪ್ರಿಯ ಕಾರ್ಯಕ್ರಮಗಳಿಗೆ ಹಣಕ್ಕಾಗಿ ಕೇಂದ್ರ ಸರ್ಕಾರ ಅಥವಾ ನಬಾರ್ಡ್ಗೆ ಕೈ ಚಾಚುವ ಬದಲು ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲಕ್ರೋಡೀಕರಿಸಿಕೊಳ್ಳಬೇಕು ಎಂದು ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಎಂ.ವಿ. ಚಂದ್ರಶೇಖರಮೂರ್ತಿ ಹೇಳಿದರು.