<p><strong>ಪರಿಶಿಷ್ಟರಿಗೆ ಶೇ 25 ಮೀಸಲಾತಿ: ದಳ ಒಲವು</strong></p>.<p>ಬೆಂಗಳೂರು, ಜೂನ್ 17– ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ– ವರ್ಗದ ಮೀಸಲಾತಿ ಪ್ರಮಾಣವನ್ನು ಶೇ 18ರಿಂದ 25ಕ್ಕೆ ಹೆಚ್ಚಿಸಬೇಕಾದ ಅಗತ್ಯವನ್ನು ಜನತಾ ದಳ ಪ್ರತಿಪಾದಿಸಿದೆ.</p>.<p>ನಾಲ್ಕು ವರ್ಷದ ಹಿಂದೆ 1991ರಲ್ಲಿ ನಡೆಸಿದ ಜನಗಣತಿಯ ಪ್ರಕಾರ ಈ ವರ್ಗದವರ ಸಂಖ್ಯೆ ಶೇ 24.8ಕ್ಕೆ ಹೆಚ್ಚಿದೆ. ಇದೇ ಅನುಪಾತದಲ್ಲಿ ಮೀಸಲಾತಿಯ ಪ್ರಮಾಣವನ್ನೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಏರಿಸಬೇಕಾಗಿದೆ ಎಂಬ ಪ್ರಸ್ತಾಪಕ್ಕೆ ಇಂದಿನ ಸಭೆಯಲ್ಲಿ ಅನುಕೂಲಕರ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p><strong>‘ಜಾನಪದ ಪಂಪ’ ಜೀಶಂಪ ನಿಧನ</strong></p>.<p>ಬೆಂಗಳೂರು, ಜೂನ್ 17–‘ಜಾನಪದ ಪಂಪ’ ಎಂಬ ಅಭಿದಾನಕ್ಕೆ ಪಾತ್ರರಾಗಿದ್ದ, ರಾಜ್ಯ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಜೀ.ಶಂ. ಪರಮಶಿವಯ್ಯ ಅವರು ಇಂದು ರಾತ್ರಿ ನಗರದ ಕಿದ್ವಾಯಿ ಸ್ಮಾರಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<p>ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಂತರ ಅದರ ಮುಖ್ಯಸ್ಥರೂ ಆಗಿ ನಿವೃತ್ತರಾಗಿದ್ದ ಜೀಶಂಪ ಅವರಿಗೆ 62 ವರ್ಷ ವಯಸ್ಸಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪರಿಶಿಷ್ಟರಿಗೆ ಶೇ 25 ಮೀಸಲಾತಿ: ದಳ ಒಲವು</strong></p>.<p>ಬೆಂಗಳೂರು, ಜೂನ್ 17– ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ– ವರ್ಗದ ಮೀಸಲಾತಿ ಪ್ರಮಾಣವನ್ನು ಶೇ 18ರಿಂದ 25ಕ್ಕೆ ಹೆಚ್ಚಿಸಬೇಕಾದ ಅಗತ್ಯವನ್ನು ಜನತಾ ದಳ ಪ್ರತಿಪಾದಿಸಿದೆ.</p>.<p>ನಾಲ್ಕು ವರ್ಷದ ಹಿಂದೆ 1991ರಲ್ಲಿ ನಡೆಸಿದ ಜನಗಣತಿಯ ಪ್ರಕಾರ ಈ ವರ್ಗದವರ ಸಂಖ್ಯೆ ಶೇ 24.8ಕ್ಕೆ ಹೆಚ್ಚಿದೆ. ಇದೇ ಅನುಪಾತದಲ್ಲಿ ಮೀಸಲಾತಿಯ ಪ್ರಮಾಣವನ್ನೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಏರಿಸಬೇಕಾಗಿದೆ ಎಂಬ ಪ್ರಸ್ತಾಪಕ್ಕೆ ಇಂದಿನ ಸಭೆಯಲ್ಲಿ ಅನುಕೂಲಕರ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p><strong>‘ಜಾನಪದ ಪಂಪ’ ಜೀಶಂಪ ನಿಧನ</strong></p>.<p>ಬೆಂಗಳೂರು, ಜೂನ್ 17–‘ಜಾನಪದ ಪಂಪ’ ಎಂಬ ಅಭಿದಾನಕ್ಕೆ ಪಾತ್ರರಾಗಿದ್ದ, ರಾಜ್ಯ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಜೀ.ಶಂ. ಪರಮಶಿವಯ್ಯ ಅವರು ಇಂದು ರಾತ್ರಿ ನಗರದ ಕಿದ್ವಾಯಿ ಸ್ಮಾರಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<p>ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಂತರ ಅದರ ಮುಖ್ಯಸ್ಥರೂ ಆಗಿ ನಿವೃತ್ತರಾಗಿದ್ದ ಜೀಶಂಪ ಅವರಿಗೆ 62 ವರ್ಷ ವಯಸ್ಸಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>