ಬೆಂಗಳೂರು, ಜ. 8– ರಾಜ್ಯ ಕಾಂಗೈ ಶಾಸಕಾಂಗ ಪಕ್ಷದ ನಾಯಕತ್ವ ಬದಲಾವಣೆ ಹಾಗೂ ಭಿನ್ನಮತದಿಂದ ಪ್ರಸಕ್ತ ರಾಜ್ಯದಲ್ಲಿ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ನಿಲುವು ‘ಬೇಜವಾಬ್ದಾರಿ ಹಾಗೂ ನಾಚಿಕೆಗೇಡಿನದು’ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಇಂದು ಇಲ್ಲಿ ಟೀಕಿಸಿದರು.