ಬೆಂಗಳೂರು, ಸೆ. 11– ‘ವಿಶ್ವವಿದ್ಯಾನಿಲಯದ ಘನತೆಗೆ, ನನ್ನ ವೈಯಕ್ತಿಕ ಗೌರವಕ್ಕೆ ಧಕ್ಕೆ ಬಂದರೂ ಚಿಂತೆ ಇಲ್ಲ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಬಗ್ಗೆ ಸಂದೇಹ ನಿವಾರಣೆ ಮಾಡಲು ಆಪಾದನೆಗಳನ್ನು ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ನಿನ ವಿಚಾರಣೆಗೆ ಕಳುಹಿಸಲು ನಿರ್ಧರಿಸಿದ್ದೇನೆ’ ಎಂದು ಶಿಕ್ಷಣ ಸಚಿವ ಶ್ರೀ ಕೆ.ವಿ. ಶಂಕರಗೌಡರು ಇಂದು ವಿಧಾನ ಪರಿಷತ್ತಿನಲ್ಲಿ ಹೇಳಿದರು.