1932ರ ಬಳಿಕ ದೇಶದಲ್ಲಿ ಜಾತಿವಾರು ಜನಗಣತಿ ನಡೆದಿಲ್ಲ. ವಿವಿಧ ಧರ್ಮ, ಜಾತಿ, ಉಪ ಜಾತಿಗಳ ಜನರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬ ನಿಖರವಾದ ಅಂಕಿಅಂಶಗಳೇ ಇಲ್ಲ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಮತ್ತು ಇತರ ಸೌಲಭ್ಯಗಳನ್ನು ವೈಜ್ಞಾನಿಕವಾಗಿ ನಿಗದಿ ಮಾಡಲು ಪೂರಕವಾಗಿ ಜನಸಂಖ್ಯೆಯ ಖಚಿತ ವರದಿಗಳಿಲ್ಲ. ಅಂತಹ ವರದಿಯೊಂದನ್ನು ಪಡೆಯುವ ಸದುದ್ದೇಶದಿಂದಲೇ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ.